Wednesday, February 19, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಈ ಹೊತ್ತಿನ ಪ್ರಮುಖ ಸುದ್ದಿಗಳು !

ಈ ಹೊತ್ತಿನ ಪ್ರಮುಖ ಸುದ್ದಿಗಳು !

  1. ಪ್ರಸಕ್ತ ಸಾಲಿನ ವಿಶ್ವವಿಖ್ಯಾತ ದಸರಾ ಮಹೋತ್ಸವ ಆಚರಣೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಲಿದೆ.
  2. ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಕ್ರಿಕೆಟ್ ಪಂದ್ಯದ 2ನೇ ದಿನವಾದ ಇಂದು ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್ ಆರಂಭಿಸಲಿದ್ದು, ಭಾರತೀಯ ಕಾಲಮಾನದ ಪ್ರಕಾರ 3 ಗಂಟೆ 30 ನಿಮಿಷಕ್ಕೆ ಪಂದ್ಯ ಆರಂಭವಾಗಲಿದೆ
  3. ಅಮೇರಿಕದ ವಿದೇಶಾಂಗ ವ್ಯವಹಾರದ ಉಪಕಾರ್ಯದರ್ಶಿ ವೆಂಡಿ ಆರ್.ಶೆರ್ಮನ್ ಅವರು ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷ್ ಶ್ರಿಂಗ್ಲಾ ಅವರನ್ನು ಭೇಟಿಯಾಗಿ ಅಫ್ಘಾನಿಸ್ತಾನದಲ್ಲಿ ಸಮನ್ವಯ, ಇಂಡೋ-ಪೆಸಿಫಿಕ್ ಸಹಕಾರವನ್ನು ಬಲಪಡಿಸುವಿಕೆ ಮತ್ತು ಹವಾಮಾನ ಬಿಕ್ಕಟ್ಟು ಸೇರಿದಂತೆ ಪ್ರಮುಖ ವಿಷಯಗಳನ್ನು ಚರ್ಚಿಸಿದರು.
  4. ಟೋಕಿಯೊ ಪ್ಯಾರಾಲಂಪಿಕ್ಸ್ ನಲ್ಲಿ ಭಾರತವು ಪದಕಗಳ ಗೆಲುವಿನಲ್ಲಿ ದಾಖಲೆ ಮಾಡಿದೆ. ಅವನಿ ಲೇಖರಾ ಅದ್ಭುತ ಸಾಧನೆ ಮಾಡಿದ್ದಾರೆ. ದೇಶಕ್ಕೆ ಮತ್ತೊಂದು ಕಂಚಿನ ಪದಕ ತಂದಿರುವುದಕ್ಕೆ ಅಭಿನಂದನೆಗಳು. ಅವರ ಮುಂದಿನ ಎಲ್ಲ ಪ್ರಯತ್ನಗಳಿಗೆ ಶುಭಾಶಯಗಳು ಹಾರೈಸುತ್ತೇನೆ.” ಪ್ರಧಾನಿ ನರೇಂದ್ರ ಮೋದಿ
  5. ಪ್ಯಾರಾಲಂಪಿಕ್ ನಲ್ಲಿ ಪದಕ ವಿಜೇತರಾದ ಸುಮಿತ್ ಆಂಟಿಲ್, ದೇವೇಂದ್ರ, ಯೋಗೀಶ್ ಕತುನಿಯಾ ಮತ್ತು ಶರದ್ ಕುಮಾರ್ ಅವರನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ನವದೆಹಲಿಯಲ್ಲಿ ಸನ್ಮಾನಿಸಿದರು.
  6. ಟೋಕಿಯೊ ಪ್ಯಾರಾಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ. ಮಹಿಳೆಯರ ಆರ್ 8, 50 ಮೀಟರ್ ರೈಫಲ್ 3 ಪಿ ಎಸ್‌ಎಚ್ 1 ಸ್ಪರ್ಧೆಯಲ್ಲಿ ಶೂಟರ್ ಅವನಿ ಲೇಖಾರಾ ಕಂಚಿನ ಪದಕ ಜಯಸಿದ್ದಾರೆ. ಪ್ರಸ್ತುತ ಪ್ಯಾರಾಲಿಂಪಿಕ್ ನಲ್ಲಿ ಇದು ಅವರ ಎರಡನೇ ಪದಕವಾಗಿದ್ದು, ಈ ಮೊಲಕ ದಾಖಲೆ ಸೃಷ್ಟಿಸಿದ್ದಾರೆ. ಭಾರತದ ಪ್ರವೀಣ್ ಕುಮಾರ್ ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.
  7. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 60 ವಸಂತಗಳ ಸಂಭ್ರಮ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು ಹಾಗೂ ನಾಲ್ಕು ಸಾರಿಗೆ ನಿಗಮಗಳಲ್ಲಿನ ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಿದರು.
  8. ಬೆಂಗಳೂರು: ಮಲ್ಲೇಶ್ವರದಲ್ಲಿ ಇಂದು ಬೆಳಗ್ಗೆ ಬೃಹತ್ ಉದ್ಯೋಗ ಮೇಳಕ್ಕೆ ಉನ್ನತ ಶಿಕ್ಷಣ ಹಾಗೂ ಐಟಿಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಚಾಲನೆ ನೀಡಿದರು.
  9. ದೇಶದಲ್ಲಿ ಇಲ್ಲಿಯವರೆಗೆ (03-09-2021, ಬೆಳಿಗ್ಗೆ 08.00) ಕೊರೋನ ಲಸಿಕೆ ಪಡೆದವರು – 67,09,59,968 ಜನ ಕಳೆದ 24 ಗಂಟೆಯಲ್ಲಿ ಲಸಿಕೆ ಪಡೆದವರು – 74,84,333 ಜನ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 34,791 ಜನ ಕೊರೋನದಿಂದ ಗುಣಮುಖರಾಗಿದ್ದಾರೆ.
  10. ವಾಹನ ಸವಾರರ ಮಾರ್ಗದರ್ಶಿ: ಹೊರಡುವ ಮುನ್ನ ನಿಮ್ಮ ವಾಹನವನ್ನು ಪರೀಕ್ಷಿಸಿಕೊಳ್ಳಿ, ನಿಮ್ಮನ್ನು ಮತ್ತು ನಿಮ್ಮ ಜೊತೆಗಿರುವವರನ್ನು ರಕ್ಷಿಸಿ, ಸೀಟ್‌ ಬೆಲ್ಟ್‌ ಹಾಗೂ ಹೆಲ್ಮೆಟ್‌ ಧರಿಸಿ ವಾಹನ ಚಲಾಯಿಸಿ. _KSRSA
  11. ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಹಣಕಾಸು ಸ್ಥಿರತೆ ಮತ್ತು ಅಭಿವೃದ್ಧಿ ಮಂಡಳಿಯ (FSDC) 24 ನೇ ಸಭೆ ನಡೆಯಿತು.
  12. ಆಫ್ಘಾನಿಸ್ತಾನದಲ್ಲಿ ನೂತನ ಸರ್ಕಾರ ರಚನೆ ಕುರಿತು ತಾಲಿಬಾನ್ ಇಂದು ಘೋಷಣೆ ಮಾಡುವ ಸಾಧ್ಯತೆ ಇದೆ.
Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news