Monday, February 17, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಈ ಹೊತ್ತಿನ ಪ್ರಮುಖ ಸುದ್ದಿಗಳು !

ಈ ಹೊತ್ತಿನ ಪ್ರಮುಖ ಸುದ್ದಿಗಳು !

  1. ಸಿ ಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ, ಪಿ ಎಂ ನರೇಂದ್ರ ಮೋದಿ ಸೇರಿದಂತೆ ಇತರ ನಾಯಕರೊಡನೆ ಸಮಾಲೋಚನೆ.
  2. ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳಾ ಬಾಕ್ಸಿಂಗ್ ನ 69 ಕೆಜಿ ವಿಭಾಗದ ಕ್ವಾರ್ಟರ್ ಫೈನಲ್ ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೈನ್ ಅವರು, ಚೀನಾದ ತೈಪೆಯ, ನಿಯೆನ್ ಚಿನ್-ಚೆನ್ ಅವರನ್ನು 4-1 ಅಂತರದಿಂದ ಸೋಲಿಸಿ, ಸೆಮಿಫೈನಲ್ಸ್ ಪ್ರವೇಶಿಸುವ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.
  3. ಮೈಸೂರು: ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಪ್ರಾಣಿಗಳ ಸಂತಾನಾಭಿವೃದ್ಧಿಯಿಂದ ಪ್ರಾಣಿಗಳ ಸಂಖ್ಯೆ ಹೆಚ್ಚುತ್ತಿದೆ . ಇತ್ತೀಚೆಗೆ ಜನ್ಮಪಡೆದ ಗಂಡು ಜಿರಾಫೆ ಸೇರಿದಂತೆ, ಈವರಗೆ ಮೃಗಾಲಯದಲ್ಲಿ 22 ಜಿರಾಫೆಗಳು ಜನ್ಮ ತಾಳಿವೆ. ಪ್ರಾಣಿಗಳನ್ನು ವೀಕ್ಷಿಸಲು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ.
  4. ಮೈಸೂರು: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಿನ್ನೆ ವಿಶ್ವ ಹುಲಿ ದಿನ ಆಚರಿಸಲಾಯಿತು. ಈ ವೇಳೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನೂತನ ಲಾಂಛನವನ್ನು ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್ ಮೋಹನ್ ಬಿಡುಗಡೆ ಮಾಡಿದರು.
  5. ಪ್ರಸ್ತುತ, ದೇಶದಲ್ಲಿ 34 ಮೆಟ್ರೋ ರೈಲು ಯೋಜನೆಗಳು ಪ್ರಗತಿಯಲ್ಲಿವೆ_ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಾಲ್ ಕಿಶೋರ್.
  6. ಪ್ರಧಾನಿ ಟ್ವೀಟ್‌ : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಅಧ್ಯಯನ ಮಾಡುವ ಹಿಂದುಳಿದ ವರ್ಗ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ವಿಶೇಷ ಮೀಸಲಾತಿ ಘೋಷಿಸಿದೆ. ಎಂಬಿಬಿಎಸ್, ಎಂಡಿ, ಎಂಎಸ್, ಡಿಪ್ಲೊಮಾ, ಬಿಡಿಎಸ್, ಎಂಡಿಎಸ್ ಕೋರ್ಸುಗಳಿಗೆ ಈ ಮೀಸಲಾತಿ ಲಭ್ಯವಾಗಲಿದೆ.
  7. ಪ್ರಾಕೃತಿಕ ವಿಕೋಪಗಳ ಮೇಲೆ ನಿಗಾ ಇರಿಸಲು ಸಹಕರಿಸುವ ಜಿಯೋ ಇಮೇಜಿಂಗ್ ಉಪಗ್ರಹ ಇಒಎಸ್-3 ಅತಿ ಶೀಘ್ರದಲ್ಲಿ ಇಸ್ರೋ ಉಡಾವಣೆ ಮಾಡಲಿದೆ. ನದಿಗಳು, ಬೆಳೆ, ಅರಣ್ಯ ಹಾಗೂ ಮತ್ತಿತರ ಪ್ರದೇಶಗಳ ಮೇಲೆ ಈ ಉಪಗ್ರಹ ಅಧ್ಯಯನ ನಡೆಸಲಿದೆ”_ ಕೇಂದ್ರ ಸಚಿವ ಡಾ. ಜತೇಂದ್ರ ಸಿಂಗ್.
  8. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು, ನೀರು ಹೊರಬಿಡಲಾಗಿದೆ. ಈ ಹಿನ್ನೆಲೆ ಬಾಗಲಕೋಟೆ, ವಿಜಯಪುರದಲ್ಲಿ ಹಲವು ಪ್ರದೇಶಗಳು ಜಲಾವೃತ.
  9. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದ್ದು. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 1ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕಡಿಮೆ ಒತ್ತಡ ಇರುವ ಕಾರಣ ಕರಾವಳಿ ಪ್ರದೇಶದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  10. ಯಾವುದೇ ಬುಡಕಟ್ಟು ಜನಾಂಗದವರನ್ನು ಅವರ ಭೂ ಹಕ್ಕಿನ ಕುರಿತು ಇತ್ಯರ್ಥವಾಗದೇ ತೆರವುಗೊಳಿಸಬಾರದು” _ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎ.ಕೆ. ಮಿಶ್ರಾ.
  11. ಟೋಕಿಯೋ ಒಲಂಪಿಕ್ಸ್: ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ. ಸಿಂಧು ಇಂದು ಜಪಾನ್‌ನ ಅಕಾನೆ ಯಮುಗುಚಿ ವಿರುದ್ಧ ಕ್ವಾರ್ಟರ್ ಫೈನಲ್ಸ್ ಪಂದ್ಯದಲ್ಲಿ ಸೆಣಸಲಿದ್ದಾರೆ.
  12. ಮತದಾರರ ಗುರುತು ಚೀಟಿಯೊಂದಿಗೆ ಆಧಾರ್ ಜೋಡಿಸುವ ಸಂಬಂಧ ಚುನಾವಣಾ ಆಯೋಗವು ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ರಾಜ್ಯಸಭೆಗೆ ತಿಳಿಸಿದ್ದಾರೆ.
Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news