Monday, February 17, 2025
Homeಅಂತರಾಷ್ಟ್ರೀಯರಾಷ್ಟ್ರೀಯ ಸುದ್ದಿಈ ಹೊತ್ತಿನ ಪ್ರಮುಖ ಸುದ್ದಿಗಳು !

ಈ ಹೊತ್ತಿನ ಪ್ರಮುಖ ಸುದ್ದಿಗಳು !

ರಾಜ್ಯ – ರಾಷ್ಟ್ರೀಯ

  • ಯುದ್ಧ ಬಾಧಿತ ಉಕ್ರೇನ್ ನಿಂದ ಭಾರತೀಯರನ್ನು ಕರೆತರುವ “ಆಪರೇಷನ್ ಗಂಗಾ’ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಸುಮಾರು 18 ಸಾವಿರ ಮಂದಿಯನ್ನು ವಾಪಸ್ ಕರೆತರಲಾಗಿದೆ. ಒ 14 ದಿನಗಳಲ್ಲಿ 90 ವಿಮಾನಗಳ ಹಾರಾಟ.
  • ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಗಾಂಧಿನಗರದ ಸಮೀಪ ನಿರ್ಮಿಸಿರುವ ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಷ್ಟ್ರೀಯ ರಕ್ಷಣಾ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಲಿದ್ದಾರೆ.
  • ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಭಾರತ ಮತ್ತು ಪ್ರವಾಸಿ ಶ್ರೀಲಂಕಾ  ತಂಡಗಳ ನಡುವೆ ಎರಡನೇ ಹಾಗೂ ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯ ಆರಂಭವಾಗಲಿದೆ.
  • ಕೇಂದ್ರ ಹಣಕಾಸು ಸಚಿವಾಲಯವು ಪ್ರದೇಶಗಳ ಅಭಿವೃದ್ಧಿಗಾಗಿ ಬಿಹಾರ, ಕರ್ನಾಟಕ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ಒಟ್ಟು 2,221 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.

ಜಾಹೀರಾತು: ಲಿಂಗಸಗೂರು ಪಟ್ಟಣದಲ್ಲಿ ಹೊಸದಾಗಿ ಪ್ರಾರಂಭವಾಗಿರುವಸಮೃದ್ಧಿ ಹಾರ್ಡವೇರ್‌ & ಪೇಂಟ್ಸ್‌ !  ಕಡಿಮೆ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಹಾರ್ಡವೇರ್ಸಾಮಗ್ರಿಗಳು ಮತ್ತು ಪೇಂಟ್ಸ್‌ !.

  • ದೇಶದ ಸ್ವಾತಂತ್ರ್ಯ ಹೋರಾಟದ ಪ್ರಮುಖ ಘಟ್ಟವಾದ ದಂಡಿ ಯಾತ್ರೆಯ 92ನೇ ವರ್ಷಾಚರಣೆ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ನ ಅಹ್ಮದಾಬಾದ್ ಬಳಿ ಇರುವ ಕೋಚ್ರಮ್ ಆಶ್ರಮದಲ್ಲಿ ದಂಡಿ ಸೈಕಲ್ ಯಾತ್ರೆಗೆ ಚಾಲನೆ ನೀಡಿದರು.
  • ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ  ಜಾಗತಿಕ ಮಟ್ಟದಲ್ಲಿ  ಉದ್ಯೋಗಾವಕಾಶ ತಂದುಕೊಡಲು  ಮೂರು ವರ್ಷಗಳ  ಒಡಂಬಡಿಕೆಗೆ ರಾಜ್ಯ ಸರ್ಕಾರ ಮತ್ತು ಬ್ರಿಟಿಷ್ ಕೌನ್ಸಿಲ್ ಬೆಂಗಳೂರಿನಲ್ಲಿ ನಿನ್ನೆ ಸಹಿ ಹಾಕಿದೆ.
  • ರೈತರಿಗೆ ಸೌರವಿದ್ಯುತ್ ಪಂಪ್ ಸೆಟ್ ಅಳವಡಿಸುವ ಕೇಂದ್ರ ಪುರಸ್ಕೃತ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ್ ಮಹಾ ಅಭಿಯಾನ್- ಪಿಎಂ- ಕುಸುಮ್- ಬಿ ಯೋಜನೆಯನ್ನು ಕರ್ನಾಟಕ  ರಾಜ್ಯದಲ್ಲಿ ಜಾರಿಗೊಳಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news