Wednesday, February 19, 2025
Homeಸುದ್ದಿಉಡುಪಿ: ಗೃಹ ಸಚಿವ ಶ್ರೀ ಬಸವರಾಜ ಬೊಮ್ಮಾಯಿ ಅವರ ಜಿಲ್ಲಾ ಪ್ರವಾಸ – ನೂತನ ಐಸಿಯು...

ಉಡುಪಿ: ಗೃಹ ಸಚಿವ ಶ್ರೀ ಬಸವರಾಜ ಬೊಮ್ಮಾಯಿ ಅವರ ಜಿಲ್ಲಾ ಪ್ರವಾಸ – ನೂತನ ಐಸಿಯು ಸೌಲಭ್ಯ ಹಾಗೂ ಕೋವಿಡ್-19 ಆಸ್ಪತ್ರೆ ಉದ್ಘಾಟನೆ !

ಉಡುಪಿ: ಜಿಲ್ಲೆಯ ಪ್ರವಾಸದಲ್ಲಿರುವ ಮಾನ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಪಡುಬಿದ್ರೆ ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ, ನೂತನ ಹೆಬ್ರಿ ತಾಲೂಕಿನಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕಡಲ್ಕೊರೆತ ಹಾಗೂ ಸಾರ್ವಜನಿಕ ಅಹವಾಲುಗಳಿಗೆ ಸಂಬಂಧಿಸಿದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿದ ಇಲಾಖೆ ಹಾಗೂ ಜಿಲ್ಲಾಆಡಳಿತಕ್ಕೆ ಸೂಚಿಸಿದರು,

ಅಲ್ಲದೇ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಕಳದ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಐಸಿಯು ಸೌಲಭ್ಯ ವಿರುವಂತಹ 10 ಹಾಸಿಗೆಯ ನೂತನ ಕೋವಿಡ್-19 ಆಸ್ಪತ್ರೆಯ ಉದ್ಘಾಟನೆಯನ್ನು ಮಾನ್ಯ ಸಚಿವರು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಸುನಿಲ್‌ ಕುಮಾರ ಕಾರ್ಕಳ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news