Saturday, May 17, 2025
Homeಇತರೆ ರಾಜ್ಯಗಳುಗುಜರಾತ್ ನ ಮಚ್ಚು ನದಿಯ ತೂಗುಸೇತುವೆ ಕುಸಿತ ; 120ಕ್ಕೂ ಹೆಚ್ಚು ಮಂದಿ ಸಾವು -...

ಗುಜರಾತ್ ನ ಮಚ್ಚು ನದಿಯ ತೂಗುಸೇತುವೆ ಕುಸಿತ ; 120ಕ್ಕೂ ಹೆಚ್ಚು ಮಂದಿ ಸಾವು – ಹಲವರಿಗೆ ಗಾಯ

ಗುಜರಾತ್:‌  ಪಶ್ಚಿಮ ಗುಜರಾತ್ ನ ಮಚ್ಚು ನದಿಯ ತೂಗುಸೇತುವೆ ಕುಸಿದ ಪರಿಣಾಮ 120ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರ 2 ಲಕ್ಷ ರೂಪಾಯಿ ಹಾಗೂ ರಾಜ್ಯ ಸರ್ಕಾರ 4 ಲಕ್ಷ ರೂಪಾಯಿ, ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ.

ಈ ಸೇತುವೆ 19ನೇ ಶತಮಾನದಲ್ಲಿ ನಿರ್ಮಾಣ ಮಾಡಲಾಗಿದ್ದು, ಇತ್ತೀಚೆಗೆ ದುರಸ್ಥಿ ಕೆಲಸ ಕೈಗೊಳ್ಳಲಾಗಿತ್ತು. ಭಾನುವಾರ ಸೇತುವೆ ಮೇಲೆ ಅತಿ ಹೆಚ್ಚಿನ ಜನರು ಸೇರಿದ್ದು ಘಟನೆಗೆ ಕಾರಣ ಎನ್ನಲಾಗುತ್ತಿದೆ. ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಗಳ ಮೇಲೆ ನಿಗಾವಹಿಸಿದ್ದಾರೆ. ಕೇಂದ್ರದಿಂದ ಎಲ್ಲಾ ರೀತಿಯ ನೆರವು ನೀಡುವುದಾಗಿ ಗುಜರಾತ್ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ. ಘಟನೆಗೆ ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಟ್ವೀಟ್ ಸಂದೇಶದಲ್ಲಿ, ಮೊರ್ಬಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ದೇವರು ಸಹನ ಶಕ್ತಿ ನೀಡಲಿ. ಈ ಘಟನೆ ತೀವ್ರ ನೋವನ್ನುಂಟು ಮಾಡಿದೆ ಎಂದು ತಿಳಿಸಿದ್ದಾರೆ.

ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್ ತಮ್ಮ ಟ್ವೀಟ್ ಸಂದೇಶದಲ್ಲಿ, ಗುಜರಾತ್ ನಲ್ಲಿನ ಸೇತುವೆ ದುರಂತ ಸುದ್ದಿ ಆಘಾತವನ್ನುಂಟು ಮಾಡಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಮೊರ್ಬಿಯಲ್ಲಿ ನಡೆದ ಘಟನೆಯಿಂದ ತೀವ್ರ ದುಃಖವಾಗಿದ್ದು, ಗುಜರಾತ್ ಮುಖ್ಯಮಂತ್ರಿ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಗಳು ತ್ವರಿತವಾಗಿ ನಡೆಯುತ್ತಿವೆ. ಸಂತ್ರಸ್ತರಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗುಜರಾತ್ ತೂಗು ಸೇತುವೆ ದುರ್ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳ ದುಃಖದಲ್ಲಿ ನಾವು ಭಾಗಿಯಾಗಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಗುಜರಾತ್ ಸರ್ಕಾರ ಹತ್ತಿರದಿಂದ ಗಮನಿಸುತ್ತಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುವುದಾಗಿ ತಿಳಿಸಿದ್ದಾರೆ.

_CLICK to Follow-Support us on DailyHunt

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news