ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ‘ಶಿಕ್ಷಕ ಮಿತ್ರ “- ಮೊಬೈಲ್ ಆಪ್ ಹಾಗೂ ಮಾನ್ಯ ಶಿಕ್ಷಣ ಸಚಿವರ ಕುರಿತ ವಿಮರ್ಶಾ ಪುಸ್ತಕ “ವಿದ್ಯಾವಿನೀತ” ಮತ್ತು ಸಚಿವರ ಅಂಕಣ ಬರಹದ ಸಂಗ್ರಹ ‘ಶಿಕ್ಷಣ ಯಾತ್ರೆ’ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದರು.


ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಸಚಿವರಾದ ಎಸ್.ಸುರೇಶಕುಮಾರ್, ವಿಧಾನ ಪರಿಷತ್ ಸದಸ್ಯರುಗಳಾದ ಡಾ.ವಾಯ್.ಎ. ನಾರಾಯಣಸ್ವಾಮಿ, ಮಾನ್ಯ ಅರುಣ ಶಾಹಪುರ ಎಮ್ ಎಲ್ ಸಿ, ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.