Wednesday, February 19, 2025
Homeಸಂಕ್ಷಿಪ್ತ ಸುದ್ದಿಗಳುಆರೋಗ್ಯರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತ ; ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ...

ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತ ; ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡು ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಜಿಲ್ಲಾಡಳಿತಗಳಿಗೆ ಆದೇಶ ನೀಡಿದೆ.

ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿರುವ ಇಲಾಖೆ, ಮಳೆಯಿಂದಾಗಿ ನೀರು ನಿಂತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳಾದ ಡೆಂಘಿ, ಮಲೇರಿಯಾದಂತ ರೋಗಗಳ ಸಂಖ್ಯೆ ಕೂಡ ಉಲ್ಬಣಿಸುವ ಸಾಧ್ಯತೆ ಇದ್ದು, ಈ ರೋಗಗಳ ಚಿಕಿತ್ಸೆ ಹಾಗೂ ನಿರ್ವಹಣೆಗಾಗಿ ಮಾರ್ಗಸೂಚಿ ಪ್ರಕಟಿಸಿದೆ.

ನಾಗರಿಕರಲ್ಲಿ ಅನಾರೋಗ್ಯ ಪರಿಸ್ಥಿತಿ ಎದುರಾದರೆ ತುರ್ತಾಗಿ ಸ್ಪಂದಿಸುವ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಗಳ ಚಿಕಿತ್ಸೆ ಹಾಗೂ ನಿರ್ವಹಣೆಗಾಗಿ ಸನ್ನದ್ಧವಾಗಿರುವಂತೆ ಮಾರ್ಗಸೂಚಿಯಲ್ಲಿ ನಿರ್ದೇಶನ ನೀಡಲಾಗಿದೆ.

image courtesy:DHFWKA

ಆರೋಗ್ಯ ಕೇಂದ್ರಗಳಲ್ಲಿ ಸಾಂಕ್ರಾಮಿಕ ರೋಗಗಳ ನಿರ್ವಹಣೆಗಾಗಿ ಸಮಗ್ರ ಕ್ರಿಯಾ ಯೋಜನೆ ಕೈಗೊಳ್ಳುವುದು. ಮಾನವ ಸಂಪನ್ಮೂಲ, ಪರೀಕ್ಷಾ ಕಿಟ್, ಔಷಧಿಗಳು ಲಭ್ಯವಿರುವಂತೆ ನೋಡಿಕೊಳ್ಳುವುದು ಸೇರಿದಂತೆ ಇನ್ನಿತರೆ ಸೌಲಭ್ಯಗಳನ್ನು ನಾಗರಿಕರಿಗೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಈ ದಿಸೆಯಲ್ಲಿ ಜಿಲ್ಲಾಮಟ್ಟದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳವರೆಗೆ ಚಿಕಿತ್ಸಾ ಸೇವೆಗಳನ್ನು ನೀಡಲು ಎಲ್ಲ ತಯಾರಿ ಮಾಡಿಕೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

_CLICK to Follow us on DailyHunt

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news