ವರದಿಗಾರರು: ಸುರೇಶ ಹಿರೇಮಠ, ಲಿಂಗಸಗೂರು.
ಲಿಂಗಸಗೂರು: ಗುರುಗುಂಟಾ ಗ್ರಾಮದ ಕಾಟಗಲ್ ದೊಡ್ಡಿಯಲ್ಲಿ ಸುರಿದ ಅಕಾಲಿಕ ಮಳೆಯಿಂದ ಸಿಡಿಲು ಬಡಿದು ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ರೂಪಾಯಿ ಚೆಕ್ಕನ್ನು ರಾಯಚೂರಿನ ಸಂಸದರಾದ ಶ್ರೀ ರಾಜಾ ಅಮರೇಶ್ವರ ನಾಯಕ ಅವರು ಇತ್ತೀಚಿಗೆ ನೀಡಿದರು.

ಈ ಸಂದರ್ಭದಲ್ಲಿ ರಾಜಾ ಶ್ರೀನಿವಾಸ ನಾಯಕ ಹಾಗೂ ಲಿಂಗಸುಗೂರಿನ ತಹಸೀಲ್ದಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.