- ಕರ್ನಾಟಕ ಸರ್ಕಾರವು ರಾಜ್ಯಕ್ಕೆ ಅಂತರಾಷ್ಟ್ರೀಯ ಆಗಮನಕ್ಕಾಗಿ ಆರ್ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ.
- ಕೇರಳದಿಂದ ಬರುವ ಎಲ್ಲಾ ವಿದ್ಯಾರ್ಥಿಗಳು/ಉದ್ಯೋಗಿಗಳು ತಮ್ಮ ಲಸಿಕೆ ಸ್ಥಿತಿಯ ಹೊರತಾಗಿಯೂ ನೆಗಟಿವ್ ಆರ್ಟಿ-ಪಿಸಿಆರ್ ಪ್ರಮಾಣಪತ್ರವನ್ನು 72 ಗಂಟೆಗಳಿಗಿಂತ ಹಳೆಯದಾಗಿರಬಾರದು. ಏಳು ದಿನಗಳ ಕಾಲ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ನಲ್ಲಿರುವ ವ್ಯಕ್ತಿಗಳು ಮತ್ತು 7 ನೇ ದಿನದಂದು ಆರ್ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು_ ಕರ್ನಾಟಕ ಸರ್ಕಾರ.
- “ಸಂಚಾರಿ ನಿಯಮಗಳನ್ನು ಅನುಸರಿಸಿ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವುದರಿಂದ ನಿಮ್ಮ ಜೀವವನ್ನು ಸುರಕ್ಷಿತವಾಗಿಸಿಕೊಳ್ಳುವುದಲ್ಲದೇ, ರಸ್ತೆಯಲ್ಲಿ ಸಂಚರಿಸುವ ಇತರರನ್ನು ಸುರಕ್ಷಿತವಾಗಿರಿಸಬಹುದು.”_KSRSA
- ಹಾವೇರಿ: ಸಿ ಎಂ ಸ್ವಕ್ಷೇತ್ರ ಶಿಗ್ಗಾಂವ ವಿಧಾನಸಭಾ ಮತಕ್ಷೇತ್ರದ ತಡಸ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ, ಶಿಗ್ಗಾಂವ ತಾಲೂಕಾ ಕಲಕಟ್ಟಿ ಗ್ರಾಮದಲ್ಲಿ ಪೂರ್ಣಗೊಂಡ ಶಿಗ್ಗಾಂವ ಏತನೀರಾವರಿ ಯೋಜನೆಯ 39 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ಹಾಗೂ ಪಟ್ಟಣದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ವೀರರಾಣಿ ಕಿತ್ತೂರ ರಾಣಿ ಚನ್ನಮ್ಮ ಮೂರ್ತಿಗೆ ಪುಷ್ಪಾರ್ಪಣೆ ಹಾಗೂ ಮಾಲಾರ್ಪಣೆ, ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಟಲ್ ಬಿಹಾರಿ ವಾಜಪೇಯಿ ವಸತಿ ನಿಲಯದ ನೂತನ ಕಟ್ಟಡವನ್ನು ಉದ್ಘಾಟನೆ, ಸವಣೂರು ಪಟ್ಟಣದಲ್ಲಿ ಸುಮಾರು ಒಂಬತ್ತು ಕೋಟಿ ರೂ. ಗಳ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಉದ್ದೇಶಿಸಿರುವ ಕಾರವಾರ-ಇಳಕಲ್ ಹೆದ್ದಾರಿ ಕಾಮಗಾರಿಗೆ ಭೂಮಿಪೂಜೆ ಹಾಗೂ ದೊಡ್ಡ ಹುಣಸೆ ಕಲ್ಮಠದ ಶ್ರೀ ಚನ್ನಬಸವೇಶ್ವರ ಮಂಗಳ ಭವನದ ಉದ್ಘಾಟನೆ, ಮೊದಲಾದ ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೊತೆಗೆ ಹಿರಿಯ ಸಚಿವರು ಸ್ಥಳಿಯ ಮುಖಂಡರುಗಳು ಉಪಸ್ಥಿತರಿದ್ದರು.
- ಹುಬ್ಬಳ್ಳಿ: “ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು”_ ಸಿ ಎಂ ಬಸವರಾಜ ಬೊಮ್ಮಾಯಿ.
- ಭಾರತೀಯ ನೌಕಾಪಡೆಯು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜೊತೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಮೊದಲ ಸ್ಥಳೀಯ, ಸಮಗ್ರ ನೌಕಾ ವಿರೋಧಿ ಡ್ರೋನ್ ಸಿಸ್ಟಮ್ (NADS), ಡಿಆರ್ ಡಿಓ ನಿಂದ ಅಭಿವೃದ್ಧಿಪಡಿಸಲಾಗಿದೆ ಮತ್ತು ಡಿಫೇನ್ಸ್ ನಲ್ಲಿ ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಬಿಇಎಲ್ ನಿಂದ ತಯಾರಿಸಲ್ಪಟ್ಟಿದೆ.
- ಪ್ರಧಾನಿ ನರೇಂದ್ರ ಮೋದಿಯವರು ಇಂದು ಇಸ್ಕಾನ್ ಸಂಸ್ಥಾಪಕರಾದ ಭಕ್ತಿವೇದಾಂತ ಪ್ರಭುಪಾದರ 125ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿಡಿಯೋ ಕಾನ್ಫರೆನ್ಸ್ ಮೂಲಕ ಜರುಗಿದ ಕಾರ್ಯಕ್ರಮದಲ್ಲಿ ಪ್ರಭುಪಾದರ ಸ್ಮರಣಾರ್ಥ 125 ರೂಪಾಯಿಯ ನಾಣ್ಯ ಬಿಡುಗಡೆ ಮಾಡಿದರು.
- ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೋರಾಟಗಳನ್ನು ನೆನಪಿಸಲು ಮತ್ತು ಅವರ ತತ್ವಾದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸಲು ದಾವಣಗೆರೆಯಲ್ಲಿ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಗಾಂಧಿಭವನವನ್ನು ಕೇಂದ್ರ ಗೃಹ ಸಚಿವರಾದ ಅಮೀತ್ ಶಾ ನಾಳೆ ಲೋಕಾರ್ಪಣೆ ಮಾಡಲಿದ್ದಾರೆ.
- ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ನಾಳೆಯಿಂದ ಸೆ.5ರವರೆಗೆ ಯುರೋಪ್ ರಾಷ್ಟ್ರಗಳಿಗೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಸ್ಲೊವೇನಿಯಾ, ಕ್ರೊವೇಶಿಯಾ ಮತ್ತು ಡೆನ್ಮಾರ್ಕ್ ಗೆ ಭೇಟಿ. ಸೌಹಾರ್ಧ ಮಾತುಕತೆ, ದ್ವಿಪಕ್ಷೀಯ ಮಾತುಕತೆ ಮತ್ತು ತಜ್ಞರೊಂದಿಗೆ ಚರ್ಚೆ _ವಿದೇಶಾಂಗ ವ್ಯವಹಾರಗಳ ಸಚಿವಾಲಯ.
- ನೌಕಾದಳದ ವೈಮಾನಿಕ ವಿಭಾಗಕ್ಕೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೆಪ್ಟೆಂಬರ್ 6ರಂದು “ರಾಷ್ಟ್ರಪತಿ ವರ್ಣ’ದ ಗೌರವ ಪ್ರದಾನ ಮಾಡಲಿದ್ದಾರೆ.
- ದೇಶದಲ್ಲಿ ಇಲ್ಲಿಯವರೆಗೆ (01-09-2021, ಬೆಳಿಗ್ಗೆ 08:00) ಕೊರೋನ ಲಸಿಕೆ ಪಡೆದವರ ಸಂಖ್ಯೆ 65,41,13,508. ಕಳೆದ 24 ಗಂಟೆಯಲ್ಲಿ ಲಸಿಕೆ ಪಡೆದವರ ಸಂಖ್ಯೆ 1,33,18,718 ಜನ (ಕಳೆದ 24 ಗಂಟೆಯಲ್ಲಿ)
- ಮೈಸೂರು: “ಕಾವೇರಿ ಜಲವಿವಾದದ ವಿಚಾರದಲ್ಲಿ ಕರ್ನಾಟಕದ ಹಿತ ಕಾಪಾಡಲು ಬದ್ಧ. ರಾಜ್ಯದಿಂದ ತಮಿಳುನಾಡಿಗೆ 30 ಟಿಎಂಸಿ ನೀರು ಬಿಡುಗಡೆ ಮಾಡಲು ಕಾವೇರಿ ನೀರು ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಗೌರವಿಸುತ್ತೇವೆ. ಕಾವೇರಿ ನೀರಿನ ನಿರ್ವಹಣಾ ಮಂಡಳಿ ನೀಡಿರುವ ಆದೇಶವನ್ನು ಪರಿಶೀಲಿಸಲಾಗುವುದು. ಮೇಕೆದಾಟು ಯೋಜನೆ ವಿಚಾರದಲ್ಲೂ ರಾಜ್ಯ ಸರ್ಕಾರ ಕರ್ನಾಟಕದ ರೈತರ ಹಿತ ಕಾಪಾಡಲಿದೆ” _ ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.
