Monday, February 24, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಈ ಹೊತ್ತಿನ ಪ್ರಮುಖ ಸುದ್ದಿಗಳು !

ಈ ಹೊತ್ತಿನ ಪ್ರಮುಖ ಸುದ್ದಿಗಳು !

  1. ಟೊಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ಸಂಜೆ ತೆರೆ: ಭಾರತ ಒಟ್ಟು 1 ಚಿನ್ನ, 2 ಬೆಳ್ಳಿ, 4 ಕಂಚಿನೊಂದಿಗೆ ತನ್ನ ಅಭಿಯಾನ ಪೂರ್ಣ. ಮುಂದಿನ ಒಲಿಂಪಿಕ್ಸ್‌ 2024ರಲ್ಲಿ  ಪ್ಯಾರಿಸ್‌ ನಲ್ಲಿ ನಡೆಯಲಿದೆ.
  2. ಮುದ್ದೇಬಿಹಾಳ: ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಆಕ್ಸಿಜನ್ ಘಟಕಕ್ಕೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  3. ಆಂಧ್ರಪ್ರದೇಶ: 2 ದಿನಗಳ ಭೇಟಿಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಶಾಖಪಟ್ಟಣದ ನರಸೀಪೇಟೆಯಲ್ಲಿಂದು “ಆಜಾದಿ ಕಾ ಅಮೃತ ಮಹೋತ್ಸವ”ದ ಭಾಗವಾಗಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
  4. ರಾಯಚೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಖರೀದಿಸಲಾದ ಘನತ್ಯಾಜ್ಯ ಸಂಗ್ರಹಣಾ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ ಸೋಮಣ್ಣ ಅವರು ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನೆರವೇರಿಸಿದರು.
  5. ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದ ವಸತಿ ಸಚಿವ ವಿ ಸೋಮಣ್ಣ ಅವರು ಗುರು ರಾಯರ ಬೃಂದಾವನದ ದರ್ಶನ ಮಾಡಿದರು. ಬಳಿಕ ಶ್ರೀ ಸುಬುಧೇಂದ್ರತೀರ್ಥ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದರು.
  6. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉತ್ತಮ ಪ್ರದರ್ಶನ ಮತ್ತು ಹೆಚ್ಚಿನ ರೋಗಿಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸಿದ ರಾಜ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸಾಲಿನಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆ ಅಗ್ರಸ್ಥಾನ ಪಡೆದುಕೊಂಡಿದೆ.
  7. ರಾಜಸ್ಥಾನ: ಲೋಕಸಭಾ ಸ್ಪೀಕರ್ ಮತ್ತು ಕೋಟಾದ ಸಂಸದ ಓಂ ಬಿರ್ಲಾ ಕೋಟ-ಬುಂಡಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು.
  8. ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದಿಂದ 2 ಹೊಸ ಕೋರ್ಸ್‌ಗಳು ಆರಂಭವಾಗಲಿದೆ. ಡಾಟಾ ಸೈನ್ಸ್ ಅಂಡ್ ಅನಾಲಿಟಿಕ್ಸ್ ಮತ್ತು ಆರ್ಟಿಫಿಷಲ್ ಇಂಟಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ಕೋರ್ಸ್‌ಗಳು ಆರಂಭವಾಗಲಿದ್ದು, ಹೆಚ್ಚಿನ ಮಾಹಿತಿ ವಿಶ್ವವಿದ್ಯಾಲಯದಿಂದ ಪಡೆದುಕೊಳ್ಳಬಹುದು.
  9. ಪಶ್ಚಿಮ ಬಂಗಾಳ: ಭಾರತೀಯ ಸೇನೆಯ ಪ್ರವಾಹ ಪರಿಹಾರ ಕಾರ್ಯಾಚರಣೆ ನಿರಂತರವಾಗಿ ಮುಂದುವರಿದಿದೆ. ಭಾರತೀಯ ಸೇನೆಯ ಎಂಜಿನಿಯರ್ ಟಾಸ್ಕ್ ಫೋರ್ಸ್ ಹೂಗ್ಲಿ ಜಿಲ್ಲೆಯ ಖಂಕುಲ್ ಗ್ರಾಮದ ಪ್ರವಾಹ ಪೀಡಿತ ಗ್ರಾಮಸ್ಥರಿಗೆ ಪರಿಹಾರ ಸಾಮಗ್ರಿಗಳನ್ನು ವಿತರಿಸಿದರು.
  10. ಸ್ವಾತಂತ್ರ್ಯ ಹಾಗೂ ಕರ್ನಾಟಕ ಏಕೀಕರಣ ಚಳವಳಿಯ ಹೋರಾಟಗಾರರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಎಸ್. ನಿಜಲಿಂಗಪ್ಪನವರ ಪುಣ್ಯತಿಥಿಯಂದು ಅವರಿಗೆ ಗೌರವ ಪ್ರಣಾಮಗಳು. ಕೃಷಿ, ನೀರಾವರಿ, ಕೈಗಾರಿಕೆ, ಸಾರಿಗೆ ಕ್ಷೇತ್ರಗಳೂ ಸೇರಿದಂತೆ ಆಧುನಿಕ ಕರ್ನಾಟಕ ನಿರ್ಮಾಣದಲ್ಲಿ ನಿಜಲಿಂಗಪ್ಪನವರ ಸಾಧನೆಗಳನ್ನು ದೇಶ ಎಂದೂ ಮರೆಯುವುದಿಲ್ಲ._ ಬಸವರಾಜ ಬೊಮ್ಮಾಯಿ, ಮಾನ್ಯ ಮುಖ್ಯಮಂತ್ರಿಗಳು.
Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news