- ಕರ್ನಾಟಕ | ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಐಎಂಡಿ ರೆಡ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಇಂದು (ಜುಲೈ 7) ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಪ್ರವಾಸಿಗರು ಮತ್ತು ಮೀನುಗಾರರು ಬೀಚ್ ಮತ್ತು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗಿನಲ್ಲಿ ಇಂದು ಕಾಲೇಜು, ಶಾಲೆ, ಅಂಗನವಾಡಿಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
- ನಿನ್ನೆ ರಾತ್ರಿ ಮುಂಬೈ ಮತ್ತು ಮಹಾರಾಷ್ಟ್ರದ ಪಕ್ಕದ ಪಾಲ್ಘರ್ ಮತ್ತು ಥಾಣೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಹಳಿಗಳ ಮೇಲೆ ನೀರು ನಿಲ್ಲದಿದ್ದರೂ ರೈಲು ಸಂಚಾರ ಇಂದು ಭಾಗಶಃ ಸ್ಥಗಿತಗೊಂಡಿದೆ. ಕುರ್ಲಾ, ಸಿಯಾನ್, ಮಾಟುಂಗಾ, ಪರೇಲ್ ಮತ್ತು ವಿರಾರ್ ಮತ್ತು ವಸಾಯಿಯಲ್ಲಿ ಜಲಾವೃತವಾಗಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
- ಮಹಾರಾಷ್ಟ್ರ| ಜುಲೈ 9 ರವರೆಗೆ ರಾಯಗಡ, ರತ್ನಗಿರಿ ಮತ್ತು ಸಿಂಧುದುರ್ಗಕ್ಕೆ ರೆಡ್ ಅಲರ್ಟ್ ನೀಡಲಾಗಿದ್ದು, ಪಾಲ್ಘರ್, ಪುಣೆ, ಕೊಲ್ಹಾಪುರ ಮತ್ತು ಸತಾರಾ ಜುಲೈ 8 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಬೈ ಮತ್ತು ಥಾಣೆ ಜುಲೈ 10 ರವರೆಗೆ ಆರೆಂಜ್ ಅಲರ್ಟ್ನಲ್ಲಿದೆ: IMD
- ಹರಿದ್ವಾರ, ಡೆಹ್ರಾಡೂನ್, ತೆಹ್ರಿ, ಪೌರಿ, ನೈನಿತಾಲ್ ಮತ್ತು ಅಲ್ಮೋರಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ: ಹವಾಮಾನ ಕೇಂದ್ರ, ಡೆಹ್ರಾಡೂನ್
- ಕೇರಳದ ಬಹುತೇಕ ಭಾಗಗಳು, ಮುಖ್ಯವಾಗಿ ಉತ್ತರ ಮತ್ತು ಮಧ್ಯ ಪ್ರದೇಶಗಳಲ್ಲಿ ಮಧ್ಯಂತರವಾಗಿ ಭಾರೀ ಮಳೆಯಾಗುತ್ತಿದೆ. ಇಂದು ತಿರುವನಂತಪುರಂ, ಕೊಲ್ಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ನಿರಂತರ ಸುದ್ದಿ ಅಪ್ ಡೇಟ್ ಗಳಿಗಾಗಿ ನಮ್ಮನ್ನು ʼಶೇರ್ ಚಾಟ್ʼ ನಲ್ಲಿ ಫಾಲೋಮಾಡಲು ಕ್ಲಿಕ್ಕಿಸಿ