- ಕೋವಿಡ್-19 ಲಸಿಕೆ ಪ್ರಮಾಣ ಪತ್ರ : ಈಗ ಮೂರು ಹಂತಗಳಲ್ಲಿ Mygovt ಕರೋನಾ ಸಹಾಯ ಕೇಂದ್ರದ ಮೂಲಕ ಕೋವಿಡ್ -19 ಲಸಿಕೆ ಪ್ರಮಾಣಪತ್ರವನ್ನು ಪಡೆಯಿರಿ. *ಸಂಪರ್ಕ ಸಂಖ್ಯೆ +919013151515 ಸೇವ್ ಮಾಡಿಕೊಳ್ಳಿ, *whatsapp ನಲ್ಲಿ covid certificate’ ಎಂದು ಟೈಪ್ ಮಾಡಿ ಮತ್ತು ಕಳುಹಿಸಿ, *OTP ನಮೂದಿಸಿ. (ಮಾಹಿತಿ ಕೃಪೆ: ಕೇಂದ್ರ ಆರೋಗ್ಯ ಸಚಿವರ ಕಛೇರಿ)
- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 9 ರಂದು ಸಂಜೆ 5.30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ “ಸಾಗರ ಭದ್ರತೆಯನ್ನು ಉತ್ತೇಜಿಸುವುದು: ಅಂತರರಾಷ್ಟ್ರೀಯ ಸಹಕಾರದ ಅಗತ್ಯತೆ” ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (UNSC) ಉನ್ನತ ಮಟ್ಟದ ಮುಕ್ತ ಚರ್ಚೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳ ರಾಷ್ಟ್ರದ ಮುಖ್ಯಸ್ಥರು ಮತ್ತು ಸರ್ಕಾರದವರು ಮತ್ತು ವಿಶ್ವಸಂಸ್ಥೆಯ ವ್ಯವಸ್ಥೆ ಮತ್ತು ಪ್ರಮುಖ ಪ್ರಾದೇಶಿಕ ಸಂಸ್ಥೆಗಳ ಉನ್ನತ ಮಟ್ಟದ ತಜ್ಞರು ಭಾಗವಹಿಸುವ ನಿರೀಕ್ಷೆಯಿದೆ. ಮುಕ್ತ ಚರ್ಚೆಯು ಕಡಲ ಅಪರಾಧ ಮತ್ತು ಅಭದ್ರತೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಮತ್ತು ಸಮುದ್ರ ವಲಯದಲ್ಲಿ ಸಮನ್ವಯವನ್ನು ಬಲಪಡಿಸುವ ಮಾರ್ಗಗಳ ಮೇಲೆ ಕೇಂದ್ರೀಕರಿಸುತ್ತದೆ.
- ಕರ್ನಾಟಕದ ಪ್ಯಾರಾ ಈಜುಗಾರ, ನಿರಂಜನ್ ಮುಕಂದನ್ ಆಗಸ್ಟ್ 24 ರಿಂದ ಸೆಪ್ಟೆಂಬರ್ 5, 2021 ರವರೆಗೆ ನಡೆಯಲಿರುವ ಟೋಕಿಯೊ 2020 ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಅವರು ಪುರುಷರ 50 ಮೀಟರ್ ಬಟರ್ಫ್ಲೈ-ಎಸ್ 7 ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. _ ಭಾರತದ ಪ್ಯಾರಾಲಿಂಪಿಕ್ ಸಮಿತಿ
- ಗಂಗಾವತಿ: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಬಳ್ಳಾರಿ ವತಿಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಯ್ದ ಗ್ರಾಮಗಳಲ್ಲಿ ಕೋವಿಡ್-19 ಜಾಗೃತಿ ಮೂಡಿಸಲಾಯಿತು.
- ಟೋಕಿಯೊದಲ್ಲಿ ಸುಸಂಘಟಿತ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಜಪಾನ್ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು.
- “ಭಾರತೀಯ ತಂಡವು ಗೆದ್ದ ಪದಕಗಳು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ ಮತ್ತು ಅಂತೆಯೇ, ಹೊಸ ಪ್ರತಿಭೆಗಳನ್ನು ಗುರುತಿಸಲು ತಳಮಟ್ಟದಲ್ಲಿ ಕ್ರೀಡೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸಲು ಕೆಲಸ ಮಾಡುವ ಸಮಯ ಬಂದಿದೆ.“_ ಪ್ರಧಾನಿ ನರೇಂದ್ರ ಮೋದಿ
- ಮುದೋಳ್: ನೂತನ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಗೋವಿಂದ ಕಾರಜೋಳ ಅವರಿಗೆ ಮುಧೋಳ್ ನಗರಸಭೆ ವತಿಯಿಂದ ಪೌರಸನ್ಮಾನ.
- ಇಂದಿನ ಕೋವಿಡ್-19 ವಿವರ: ಕರ್ನಾಟಕ– ಹೊಸ ಪ್ರಕರಣ : 1598 ಇಂದು ಚೇತರಿಸಿಕೊಂಡವರು: 1914 ಒಟ್ಟು ಸಕ್ರಿಯ ಪ್ರಕರಣ : 23930 ಇಂದಿನ ಸಾವಿನ ಸಂಖ್ಯೆ ಮತ್ತು ಶೇಖಡಾವಾರು ಪ್ರಮಾಣ : 20 (1.25%) ಒಟ್ಟು ಸಾವು : 36793 ಕೋವಿಡ್ ಪರೀಕ್ಷೆ ಮತ್ತು ಶೇಖಡಾವಾರು ಪ್ರಮಾಣ : 146446 (1.09%) ಇದುವರೆಗಿನ ಒಟ್ಟು ಲಸಿಕೆ: 32901814. ಕೇರಳ – 18,607 ಹೊಸ ಪ್ರಕರಣಗಳು, 93 ಸಾವುಗಳು ಮತ್ತು 20,108 ಚೇತರಿಕೆ ಪ್ರಕರಣಗಳು.
- ನವದೆಹಲಿ: ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಂಗವಾಗಿ ‘ಕ್ವಿಟ್ ಇಂಡಿಯಾ ಚಳುವಳಿಯ’ 79 ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರದರ್ಶನವನ್ನು ಉದ್ಘಾಟಿಸಲಾಯಿತು. “ಆಜಾದಿ ಕಾ ಅಮೃತ್ ಮಹೋತ್ಸವವನ್ನು ಜನರ ಹಬ್ಬವಾಗಿ ಆಚರಿಸಲಾಗುತ್ತಿದೆ”_ ಜಿ. ಕಿಶನ್ ರೆಡ್ಡಿ, ಕೇಂದ್ರ ಸಂಸ್ಕೃತಿ ಸಚಿವರು.
- PMUY: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆ (ಪ್ರಧಾನ್ ಮಂತ್ರಿ ಉಜ್ವಲ ಯೋಜನೆ – PMUY) ಎರಡನೇ ಹಂತದ ಕಾರ್ಯಕ್ರಮವನ್ನು 2021 ರ ಆಗಸ್ಟ್ 10 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉತ್ತರ ಪ್ರದೇಶದ ಮಹೋಬಾದಲ್ಲಿ ಎಲ್ಪಿಜಿ ಸಂಪರ್ಕಗಳನ್ನು ಹಸ್ತಾಂತರಿಸುವ ಮೂಲಕ ಪ್ರಾರಂಭಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದು, ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
- ಯಾದಗಿರಿ: ಬಾಲಕಿಯರ ಬಾಲ ಮಂದಿರವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ಉದ್ಘಾಟನೆ ಮಾಡಿದರು.
- ರೈತರ ಮಕ್ಕಳ ಉನ್ನತ ವ್ಯಾಸಂಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ವಾರ್ಷಿಕ ಶಿಷ್ಯವೇತನ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ.
