ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದ್ದು, ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸಂಸತ್ ಭವನದ ಸಂಕೀರ್ಣದಲ್ಲಿರುವ ಬಾಬಾ ಸಾಹೇಬ್ ಅಂಡೇಡ್ಕರ್ ಅವರ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರು, ಸಂಸದರು ಹಾಗೂ ಗಣ್ಯರು ಪುಷ್ಪನಮನ ಸಲ್ಲಿಸಲಿದ್ದಾರೆ.

ಸಾಮಾಜಿಕ ಹರಿಕಾರರಾಗಿ, ಆರ್ಥಿಕ ತಜ್ಞರಾಗಿ, ರಾಜಕಾರಣಿಯಾಗಿ ಅಂಬೇಡ್ಕರ್ ಅವರು ದೇಶ ಕಂಡ ಅತ್ಯದ್ಭುತ ನಾಯಕರಾಗಿದ್ದು, ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನವನ್ನು ನೀಡುವ ಮೂಲಕ ಮಾದರಿಯಾಗಿದ್ದಾರೆ. ತಮ್ಮ ಜೀವನವನ್ನು ಸಾಮಾಜಿಕ ಮತ್ತು ಜಾತಿ ತಾರತಮ್ಯದ ನಿರ್ಮೂಲನೆಗಾಗಿ ಮುಡಿಪಾಗಿಟ್ಟ ಧೀಮಂತ ನಾಯಕರಾಗಿದ್ದ ಅವರು, ಸ್ವಾತಂತ್ರ್ಯಾ ನಂತರದ ಭಾರತದಲ್ಲಿ ಕಾನೂನು ಮತ್ತು ನ್ಯಾಯ ಸಚಿವರಾಗಿ ಅಮೂಲ್ಯ ಕೊಡುಗೆಯನ್ನು ನೀಡಿದ್ದಾರೆ.