ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ವಿಧಾನಸೌಧದಲ್ಲಿ ಆರ್.ಡಿ.ಪಿ.ಆರ್. ಇಲಾಖೆಯ ಜಲಾಮೃತ ಕೈಪಿಡಿ 2020ನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಬಿಡುಗಡೆ ಮಾಡಿದರು.
ಇಲಾಖೆಯ ಮಾನ್ಯ ಸಚಿವರಾದ ಕೆ.ಎಸ್. ಈಶ್ವರಪ್ಪ ಇವರ ನೇತೃತ್ವದಲ್ಲಿ ನಡೆದ ಈ ಸಮಾರಂಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ಶ್ರೀಮತಿ ಉಮಾ ಎನ್, ಜಲಾಮೃತ ನಿರ್ದೇಶಕರಾದ ಬಿ.ನಿಜಲಿಂಗಪ್ಪರವರು, ಆಯುಕ್ತರಾದ ಶ್ರೀಮತಿ ಪ್ರಿಯಾಂಕ್ ಮೇರಿ ಫ್ರಾನ್ಸಿಸ್ ಮುಂತಾದವರು ಭಾಗವಹಿಸಿದ್ದರು.