- ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್(83) ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. 1939ರ ಜೂನ್ 18ರಂದು ಜನಿಸಿದ ಚಂಪಾ ಅವರ ಹುಟ್ಟೂರು ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹತ್ತಿಮತ್ತೂರು. ಕನ್ನಡ ಕನ್ನಡ ಬನ್ನಿ ನಮ್ಮ ಸಂಗಡ ಎನ್ನುತ್ತ ಕನ್ನಡಕ್ಕೆ ಅಪಾರ ಸೇವೆ ಸಲ್ಲಿಸಿದ ಇವರು, “ಸಂಕ್ರಮಣ” ಹೆಸರಿನ ಸಾಹಿತ್ಯ ಪತ್ರಿಕೆಯ ಸಂಪಾದಕರು- ಪ್ರಕಾಶಕರೂ ಆಗಿದ್ದರು. ಕನ್ನಡದ ಹಲವು ಸಾಹಿತಿಗಳನ್ನು ಗುರುತಿಸಿದ ಹೆಗ್ಗಳಿಕೆಯನ್ನು ಈ ಪತ್ರಿಕೆ ಹೊಂದಿದೆ. ಚಂಪಾ ಅವರ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
- ಮೇಕೆದಾಟು ಪಾದಯಾತ್ರೆ: ಕೋವಿಡ್ 19 ಪ್ರೋಟೋಕಾಲ್ಗಳನ್ನು ಉಲ್ಲಂಘಿಸಿದ್ದಕ್ಕಾಗಿ 30 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ರಾಮನಗರ ಜಿಲ್ಲಾಡಳಿತ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ. ಕಾನೂನನ್ನು ಉಲ್ಲಂಘಿಸುವ ಯಾರನ್ನೂ ನಾವು ಬಿಡುವುದಿಲ್ಲ: _ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ-ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಂಗಳೂರಿನಲ್ಲಿ ವಿಧಿವಶರಾಗಿರುವ ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದು ಶ್ರದ್ಧಾಂಜಲಿ ಅರ್ಪಿಸಿದರು, ಕುಟುಂಬದವರಿಗೆ ಸಾಂತ್ವನ ಹೇಳಿದರು.
- ಉದ್ಯಮ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಇಂದಿನಿಂದ 16 ರವರೆಗೆ ಮೊಟ್ಟ ಮೊದಲ ಬಾರಿಗೆ ಭಾರತದ ನವೋದ್ಯಮ ನಾವೀನ್ಯತೆಯ ಸಪ್ತಾಹ- ಸ್ಟಾರ್ಟ್ಅಪ್ ಇಂಡಿಯಾ ಇನ್ನೋವೇಶನ್ ವೀಕ್ ಅನ್ನು ಆಯೋಜಿಸಿದೆ.
- ದೆಹಲಿಯ ಮೂಲ್ಚಂದ್ ಆಸ್ಪತ್ರೆಯಲ್ಲಿ ಡ್ರೈವ್-ಥ್ರೂ COVID ಮುನ್ನೆಚ್ಚರಿಕೆಯ ಡೋಸ್ ಲಸಿಕೆ ನಡೆಯುತ್ತಿದೆ, “ಆರೋಗ್ಯ ಕಾರ್ಯಕರ್ತರು, 60 ವರ್ಷ ಮತ್ತು ಮೇಲ್ಪಟ್ಟ ಕೊಮೊರ್ಬಿಡಿಟಿಗಳಿಗೆ ಲಸಿಕೆ ನೀಡಲಾಗುತ್ತಿದೆ. ನೋಂದಾಯಿತ ಮತ್ತು ನೋಂದಾಯಿಸದ ಫಲಾನುಭವಿಗಳಿಗೆ ಡೋಸ್ ನೀಡಲಾಗುತ್ತಿದೆ” ಎಂದು ಆಸ್ಪತ್ರೆಯ ಟ್ರಸ್ಟಿ ದುಗ್ಗು ತಲ್ವಾರ್ ಹೇಳುತ್ತಾರೆ.
- ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ ಗರ್ಭಿಣಿ ಮತ್ತು ದಿವ್ಯಾಂಗ ಉದ್ಯೋಗಿಗಳಿಗೆ ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯದ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
