ಹಣಕಾಸು – ಕ್ರೀಡೆ – ರಾಜಕೀಯ – ಲಸಿಕೆ
- ರೆಪೊ ದರ ಶೇ.4.40ಕ್ಕೆ ಏರಿಕೆ; 0.5 ರಷ್ಟು ಸಿಆರ್ ಆರ್ ಹೆಚ್ಚಳ: ಆರ್ಬಿಐ ಗವರ್ನರ್
- ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಐಸ್ಲ್ಯಾಂಡ್ ಪ್ರಧಾನಿ ಕತ್ರಿನ್ ಜಾಕೋಬ್ಸ್ದೊಟ್ಟಿರ್ ಅವರೊಂದಿಗೆ ಮಾತುಕತೆ ನಡೆಸಿದರು. ವ್ಯಾಪಾರ, ಇಂಧನ, ಮೀನುಗಾರಿಕೆ ಮತ್ತು ಹೆಚ್ಚಿನ ಕ್ಷೇತ್ರಗಳಲ್ಲಿ ಬಾಂಧವ್ಯವನ್ನು ಹೆಚ್ಚಿಸುವ ಕುರಿತು ಅವರು ಚರ್ಚಿಸಿದರು.
- “ಕೇಂದ್ರೀಯ ಅಬಕಾರಿ ಕಾಯ್ದೆ, 1944 ರ ಅಡಿಯಲ್ಲಿ ನೋಂದಾಯಿಸಲಾದ ತಯಾರಕರ ಗಮನಕ್ಕೆ! ಏಪ್ರಿಲ್, 2022 ರಲ್ಲಿ ತೆರವುಗೊಳಿಸಲಾದ ಸರಕುಗಳಿಗೆ ಅಬಕಾರಿ ಸುಂಕವನ್ನು ಪಾವತಿಸಲು ಕೊನೆಯ ದಿನಾಂಕವು ಮೇ 06, 2022 ಆಗಿದೆ.”_CBIC
- ಕ್ರಿಕೆಟಿಗ ವೃದ್ಧಿಮಾನ್ ಸಹಾ ಅವರನ್ನು ಬೆದರಿಸಿದ ಪತ್ರಕರ್ತ ಬೋರಿಯಾ ಮಜುಂದಾರ್ ಅವರನ್ನು ಎರಡು ವರ್ಷಗಳ ಕಾಲ ನಿಷೇಧಿಸಿ ಬಿಸಿಸಿಐ ಆದೇಶ ಹೊರಡಿಸಿದೆ.
- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏಪ್ರಿಲ್ 5-6 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಮೇ 5 ರಂದು ಬಿಒಪಿ ಹರಿದಾಸಪುರದಲ್ಲಿ ಮೈತ್ರಿ ಮ್ಯೂಸಿಯಂ ಮತ್ತು ಪ್ರಹರಿ ಸಮ್ಮೇಳನದ ಶಂಕುಸ್ಥಾಪನೆ ಮತ್ತು ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆ, 6 ರಂದು, ಅವರು ತೀನ್ ಬಿಘಾಗೆ ಭೇಟಿ ನೀಡಲಿದ್ದಾರೆ ಮತ್ತು ಕೂಚ್ ಬೆಹಾರ್ನ ಬೋಪಿ ಜಿಕಾಬರಿಯಲ್ಲಿ ಬಿಎಸ್ಎಫ್ ಸಿಬ್ಬಂದಿಯೊಂದಿಗೆ ಸಂವಾದ, ಕೋಲ್ಕತ್ತಾದಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಸಂಸದರು, ಶಾಸಕರು ಮತ್ತು ರಾಜ್ಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ವಿಕ್ಟೋರಿಯಾ ಸ್ಮಾರಕದಲ್ಲಿ ಸಂಸ್ಕೃತಿ ಸಚಿವಾಲಯದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಆಯೋಜಿಸಿರುವ ಕರ್ನಾಟಕದ ಏಳು ಅದ್ಭುತಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅಭಿಯಾನದ ಲಾಂಛನ ಬಿಡುಗಡೆ ಹಾಗೂ ವೆಬ್ ಸೈಟ್ ಉದ್ಘಾಟಿಸಿದರು. ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್ ಹಾಗೂ ಇತರರು ಉಪಸ್ಥಿತರಿದ್ದರು.
- ದೆಹಲಿ| “ಈ ಹಿಂದೆ ಎಲ್ಲಾ ಕಟ್ಟಡ ಕಾರ್ಮಿಕರು ಪ್ರಯಾಣಕ್ಕಾಗಿ ತಿಂಗಳಿಗೆ 1000 ರಿಂದ 3000 ರೂಪಾಯಿಗಳವರೆಗೆ ಖರ್ಚು ಮಾಡಬೇಕಾಗಿತ್ತು. ಇದೀಗ ಅಂತಹ ಕಾರ್ಮಿಕರಿಗೆ ಉಚಿತ ಬಸ್ ಪ್ರಯಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ರಾಜ್ಯದ ಸುಮಾರು 10 ಲಕ್ಷ ಕೂಲಿ ಕಾರ್ಮಿಕರಿಗೆ ಅನುಕೂಲ”: ಮನೀಶ್ ಸಿಸೋಡಿಯಾ, ಉಪ ಮುಖ್ಯಮಂತ್ರಿ
- ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಅಭಿಯಾನದ ಅಡಿಯಲ್ಲಿ, ದೇಶದಲ್ಲಿ ಇದುವರೆಗೆ 189 ಕೋಟಿ 48 ಲಕ್ಷಕ್ಕೂ ಹೆಚ್ಚು Anti-covid ಲಸಿಕೆಗಳನ್ನು ನೀಡಲಾಗಿದೆ. 12 ರಿಂದ 14 ವರ್ಷದೊಳಗಿನ 2 ಕೋಟಿ 95 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ಹಾಕಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 3 ಸಾವಿರದ 205 ಹೊಸ ಪ್ರಕರಣಗಳು ದೃಢಪಟ್ಟಿವೆ.
- ಕೇರಳದಲ್ಲಿ ಶನಿವಾರದವರೆಗೂ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 40 ಕಿಮೀ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲೋನ್ ಮಸ್ಕ್ ಅವರು ಟ್ವಿಟರ್ ಎಲ್ಲಾ ಸಾಮಾನ್ಯ ಬಳಕೆದಾರರಿಗೆ ಉಚಿತವಾಗಿ ಸೇವೆಗಳನ್ನು ಒದಗಿಸುವುದನ್ನು ಮುಂದುವರೆಸುತ್ತಾರೆ, ಆದರೆ ವ್ಯಾಪಾರ ಮತ್ತು ಸರ್ಕಾರಿ ಬಳಕೆದಾರರಿಗೆ ಭಾಗಶಃ ಶುಲ್ಕವಿರಬಹುದು.
